ಮಹಾಮನೆಯ ಮಹಾಮಗಳು
ಮಹಾಮನೆಯ ಮಗಳು
ಉರಿಯು೦ಡ ಕರ್ಪುರ
ಕದಳಿಯ ಕತ್ತಲೆಯ
ಬೆಳಗುವ ಮಹಾಬೆಳಗು
ಅಕ್ಕರೆಯ ಅಕ್ಕ
ಮಹಾದೇವಿಯಕ್ಕ
ತೊರೆದು ಕೌಶಿಕನರಮನೆ
ಹೊರಟಳು ಕಲ್ಯಾಣಕೆ
ತುಂಡು ಕಂಬಳಿ ಹೊತ್ತು
ತವರು ಮೋಹವ ಬಿಟ್ಟು
ತರು ಗುಲ್ಮ ಲತೆ ಹೂವು
ಪಶು ಪಕ್ಷಿ ದುಂಬಿಯ ಸ್ನೇಹ ತೊಟ್ಟು
ಮಗಳೆ೦ದು ಕರೆದೊಯ್ದ
ಅನುಭವದ ಮಂಟಪಕೆ
ಅಣ್ಣ ಬಸವಣ್ಣ ಶರಣರ ದಂಡು
ಅಲ್ಲಮರ ಪ್ರಶ್ನೆಗೆ ಕೊಟ್ಟಳು ಉತ್ತರ ಅಪರೂಪದ ಅನುಭಾವ
ಚೆಲುವಿನ ಚಿತ್ಕಳೆ ಜ್ಞಾನದ ಜ್ಯೋತಿ
ಉಡತಡಿಯ ಉಡುಗೊರೆ
ಕಲ್ಯಾಣದ ಐಸಿರಿ
ಶ್ರೀಶೈಲಕೆ ನಡೆ ನಿಂತಳು
ಗುರು ಲಿಂಗವಿಡಿದು
ಚೆನ್ನಮಲ್ಲಿಕಾರ್ಜುನರ ನೆರಳು
ಮಹಾಮನೆಯ ಮಹಾಮಗಳು
–ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಉಡುತಡಿಯಲ್ಲಿ ಸಂಜಾತೆಯಾಗಿ, ನಿಸರ್ಗದ ಮಗಳಾಗಿ, ಅನುಭವ ಮಂಟಪದ ಅರಿವಾಗಿ, ಮಹಾಮನೆ ಬೆಳಕಾಗಿ, ಚೆನ್ನಮಲ್ಲಿಕಾರ್ಜುನನಲ್ಲಿ ಒಂದಾಗಿ ಜಗನ್ಮಾತೆಯಾದ ಪರಿಯನ್ನು ಕವನದಲ್ಲಿ ಮನೋಜ್ಞವಾಗಿ ಮೂಡಿಬಂದಿದೆ.
The poem reveals the complete journey of Akkamahadevi from Udutadi to Kadalivana. Very nicely composed.