ಬುದ್ಧಿನ್ನಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರಾತಿಗೆ ಒತ್ತಾಯ

ಬುದ್ಧಿನ್ನಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರಾತಿಗೆ ಒತ್ತಾಯ

e-ಸುದ್ದಿ ಮಸ್ಕಿ

ಮಸ್ಕಿ: ತಾಲ್ಲೂಕಿನ ಬುದ್ದಿನ್ನಿ (ಎಸ್) ಗ್ರಾಮಕ್ಕೆ ಪ್ರೌಢ ಶಾಲೆ ಮುಂಜೂರು ಮಾಡಬೇಕು ಎಂದು ಆಗ್ರಹಿಸಿ ಹತ್ತಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಶುಕ್ರವಾರ ಪಟ್ಟಣದಲ್ಲಿ ಜಾಥಾ ನಡೆಸಿ ಹಳೆಯ ಬಸ್ ನಿಲ್ದಾಣದ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬುದ್ದಿನ್ನಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಗಾಗಿ ಕಟ್ಟಡ ನಿರ್ಮಾಣ ಮಾಡಿ ಎರಡು ವರ್ಷವಾಗಿದೆ. ಸರ್ಕಾರ ಇದುವರೆಗೂ ಪ್ರೌಢ ಶಾಲೆಗೆ ಮುಂಜೂರಾತಿ ನೀಡದ ಕಾರಣ ಈ ಭಾಗದ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂತಿತಗೊಳ್ಳುವಂತಾಗಿದೆ ಎಂದು ಹೋರಾಟ ಸಮಿತಿ ಮುಖಂಡ ಬಸವರಾಜಪ್ಪಗೌಡ ಹಾರ್ವಾಪೂರ ದೂರಿದ್ದಾರೆ.
ಪ್ರೌಢ ಶಾಲೆ ಮುಂಜೂರು ಮಾಡುವಂತೆ ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲಾಗಿತ್ತು, ಆದರೂ ಸರ್ಕಾರ ಮಾತ್ರ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವೆರು ಆರೋಪಿಸಿದರು.
ಸಂಸದ ಕರಡಿ ಸಂಗಣ್ಣ, ಶಾಸಕ ಆರ್. ಬಸನಗೌಡ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಬುದ್ದಿನ್ನಿ ಗ್ರಾಮಕ್ಕೆ ಪ್ರೌಢ ಶಾಲೆ ಆರಂಭಿಸುವ ಬಗ್ಗೆ ಪತ್ರ ಕೊಟ್ಟಿದ್ದರೂ ಸಹ ಸರ್ಕಾರ ಮಾತ್ರ ಯಾವುದೇ ಸ್ಪಂದನೆ ಮಾಡುತ್ತಿಲ್ಲ ಎಂದರು.
ಪ್ರತಿಭಟನೆಯಲ್ಲಿ ಬುದ್ದಿನ್ನಿ, ಹೂವಿನಭಾವಿ, ಮುದಬಾಳ, ಹರ್ವಾಪೂರ, ತುಪ್ಪದೂರು, ಕಾಟಗಲ್ , ಸಾನಬಾಳ ಸೇರಿದಂತೆ ಇತರೆ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಅಬ್ದುಲ್ ಗನಿ, ಕರವೇ ಅಧ್ಯಕ್ಷರಾದ ಆಶೋಕ ಮುರಾರಿ, ದುರ್ಗರಾಜ್ ವಟಗಲ್, ಬಸವರಾಜ ಎಕ್ಕಿ,  ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮೌನೇಶ, ನಾಗರೆಡ್ಡಿ ಬುದ್ದಿನ್ನಿ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Don`t copy text!